ದಿನಾಂಕ17/02/2022 ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾನ್ಯ  ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಕೆ ಎಸ್ ಈಶ್ವರಪ್ಪ ನವರ ಅಧ್ಯಕ್ಷತೆಯಲ್ಲಿ 2006ರ ಅರಣ್ಯ ಹಕ್ಕು ಕಾಯಿದೆ ಪ್ರಕಾರ ಸಭೆ ಕರೆಯಲಾಗಿತ್ತು ಈ ಸಭೆಗೆ ಮಾನ್ಯ ವಿಧಾನಸಭೆ ಅಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಯವರು ಹಾಗೂ ಶಾಸಕರು, ಪರಿಷತ್ ಸದಸ್ಯರು ಮೇಲ್ಮಟ್ಟದ ಅಧಿಕಾರಿಗಳು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಭಾಗವಹಿಸಿದರು ಈ ಸಭೆಯಲ್ಲಿ ಅಧಿಕಾರಿಗಳು ಅರಣ್ಯವಾಸಿಗಳಿಗೆ ಮತ್ತು ಇತರ ಪಾರಂಪರಿಕ ಅರಣ್ಯವಾಸಿಗಳಿಗೆ 2006ರ ಅರಣ್ಯ ಹಕ್ಕು ಕಾಯ್ದೆಯನ್ನು ಭೂಮಿ ನೀಡಲು ಅಧಿಕಾರಿಗಳು ವಿಫಲವಾಗಿದ್ದಾರೆ ಈ ಸಂಬಂಧ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸುವ ಸಂಬಂಧ ಈ ತಿಂಗಳ 25 ನೇ ತಾರೀಕಿನ ಒಳಗೆ ಸಭೆ ಕರೆದು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವುದಾಗಿ ಸುತ್ತೋಲೆ ಮೂಲಕ ಆದೇಶಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ.